ಬೆಳ್ತಂಗಡಿ : ನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ ಆಟೋ ಚಾಲಕ

3:17 PM, Tuesday, August 13th, 2019
Share
1 Star2 Stars3 Stars4 Stars5 Stars
(No Ratings Yet)
Loading...

Auto driverಬೆಳ್ತಂಗಡಿ  : ಆಟೋ ಚಾಲಕರೊಬ್ಬರು ನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ. ಬೆಳ್ತಂಗಡಿಯ ಆಟೋ ಚಾಲಕ ನೆರೆ ಸಂತ್ರಸ್ತರಿಗೆ ಬರೋಬ್ಬರಿ 1 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹೊನ್ನಪ್ಪ ಗೌಡ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೆರ ಸಂತ್ರಸ್ತರಿಗೆ ನೆರವಾಗಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಮನವಿಗೆ ಸ್ಪಂದಿಸಿದ ಆಟೋ ಚಾಲಕ ಹೊನಪ್ಪ ಗೌಡ ಅವರು 1 ಲಕ್ಷ ರುಪಾಯಿ ಸಹಾಯವನ್ನು ಶಾಸಕರ ಕಚೇರಿಯಲ್ಲಿ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English