- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ

sadaashiva [1]ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿರುವ ಘಟನೆ ಆ.16 ರ ಶುಕ್ರವಾರ ತಡರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿರುವ ಯುವಕ ಕಡಬದ ನಿವಾಸಿ 29 ವರ್ಷದ ಸದಾಶಿವ ಎಂದು ತಿಳಿದುಬಂದಿದೆ. ಈತ ನಿನ್ನೆ ರಾತ್ರಿ 9.30 ರ ಸುಮಾರಿಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.