ಮಂಗಳೂರು : ಮೀನುಗಾರರಿಗೆ ತೆರಿಗೆ ರಹಿತ ಡೀಸೆಲ್, ಪ್ರಮಾಣ ಹೆಚ್ಚಳ; ಯಡಿಯೂರಪ್ಪ

3:01 PM, Thursday, August 22nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Meenugaarikeಮಂಗಳೂರು : ಕರಾವಳಿಯ ಮೀನುಗಾರರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಯಾಂತ್ರೀಕೃತ ಮೀನುಗಾರರಿಗೆ ನೀಡಲಾಗುವ ತೆರಿಗೆ ರಹಿತ ಡೀಸೆಲ್ ವಿತರಣೆಯ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಸರಕಾರ ಸ್ಪಂದಿಸಿದೆ.

ಬುಧವಾರದಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಕೃಷ್ಣಾದಲ್ಲಿ ಭೇಟಿಯಾಗಿ ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಮಲ್ಪೆ ಮೀನುಗಾರರ ನಿಯೋಗದ ಸದಸ್ಯರು ಹಾಜರಿದ್ದರು.

ಮೀನುಗಾರರ ಯಾಂತ್ರೀಕೃತ ಬೋಟ್‍ಗಳಿಗೆ ಡೆಲಿವರಿ ಪಾಯಿಂಟ್‍ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್‍ ಪ್ರಮಾಣವನ್ನು 400 ಲೀಟರುಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English