- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಸರಗೋಡು : ಕಾರು – ಲಾರಿ ನಡುವೆ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಗಂಭೀರ

Kasaragodu [1]ಕಾಸರಗೋಡು : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಉಲ್ಲಾಲದ ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಆ. 22 ರ ರಾತ್ರಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಗಳಾದ ಕುಂಬಳೆ ಆರಿಕ್ಕಾಡಿಯ ಮುಹಮ್ಮದ್ ಆಫ್ರಾತ್ (20) , ಬಂಬ್ರಾಣದ ಜಾಫರ್ (21) , ಸುಳ್ಯದ ಅನಾಸ್ (20) ಮತ್ತು ಕಾಜೂರಿನ ಮುಹಮ್ಮದ್ ಅನಾಸ್ (20) ರನ್ನು ಮಂಗಳೂರುನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂದ್ಯೋಡು ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಉಳ್ಳಾಲಕ್ಕೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮತ್ತು ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಸರಕು ಲಾರಿ ನಡುವೆ ಅಪಘಾತ ನಡೆದಿದೆ .