- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು : ಆಗಸ್ಟ್ 31ರಂದು ನೆರೆಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ

siddaramayya [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಆಗಸ್ಟ್ 31ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ನೆರೆ ಹಾವಳಿಗೆ ತತ್ತರಿಸಿರುವ ಜನರಿಗೆ ಸಾಂತ್ವನ ಹೇಳಲು ಮತ್ತು ವಸ್ತುಸ್ಥಿತಿ ಪರಿಶೀಲನೆ ನಡೆಸಲು ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 31ರಂದು ಸಿದ್ದರಾಮಯ್ಯ ಅವರು ಮಂಗಳೂರಿಗೆ ಆಗಮಿಸಿ, ಮಂಗಳೂರು ಹೊರವಲಯದಲ್ಲಿ ತ್ಯಾಜ್ಯ ಕುಸಿತದಿಂದ ತತ್ತರಿಸಿರುವ ಪಚ್ಚನಾಡಿ ಮಂದಾರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳ್ತಂಗಡಿ ತಾಲೂಕಿಗೆ ಹೋಗಿ ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ” ಎಂದು ತಿಳಿಸಿದರು.