ಶ್ರೀರಾಮುಲುಗೆ “ಕೈ” ತಪ್ಪಿದ ಡಿಸಿಎಂ ಹುದ್ದೆ, ಕೊಪ್ಪಳದಲ್ಲಿ ಬೆಂಕಿ

5:47 PM, Tuesday, August 27th, 2019
Share
1 Star2 Stars3 Stars4 Stars5 Stars
(No Ratings Yet)
Loading...

sriramuluಕೊಪ್ಪಳ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದ ಬೆನ್ನಲ್ಲೇ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮುಲು ಅಭಿಮಾನಿಗಳು ಕೊಪ್ಪಳ, ಬಳ್ಳಾರಿಯಲ್ಲಿ ಬೆಂಕಿಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಗಳವಾರ ಕೊಪ್ಪಳದ ಕನಕಗಿರಿಯಲ್ಲಿ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ಬಿಜೆಪಿ ವರಿಷ್ಠ ಅಮಿತ್ ಶಾ ಅವರ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮುಲು ಉತ್ತರ ಕರ್ನಾಟಕದ ಜನಪ್ರಿಯ ನಾಯಕ. ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಕೊಡಬೇಕಿತ್ತು ಎಂದು ಆಗ್ರಹಿಸಿರುವ ಶ್ರೀರಾಮುಲು ಅಭಿಮಾನಿಗಳು ರಸ್ತೆ ಮಧ್ಯೆ ಟಯರ್ ಗೆ ಬೆಂಕಿ ಹಚ್ಚಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English