ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಇಂದು ಮಂಗಳೂರಿಗೆ ಆಗಮನ

10:43 AM, Thursday, August 29th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

nalin-kumarಮಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಂಗಳವಾರ ಬೆಂಗಳೂರಿ ನಲ್ಲಿ ಅಧಿಕಾರ ಸ್ವೀಕರಿಸಿದ ಅನಂತರ ನಳಿನ್‌ ಕುಮಾರ್‌ ಕಟೀಲು ಅವರು ಇದೇ ಮೊದಲ ಬಾರಿಗೆ ಆ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ಸ್ವಾಗತಿಸಲು ದ.ಕ. ಬಿಜೆಪಿ ಸರ್ವ ಸಿದ್ಧತೆ ನಡೆಸಿದೆ.

ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ನಳಿನ್‌ ಕುಮಾರ್‌ ಕಟೀಲು ಅವರನ್ನು ದ.ಕ. ಜಿಲ್ಲಾ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸ್ವಾಗತಿಸಿ ವಾಹನಗಳ ಮೆರವಣಿಗೆ ಮೂಲಕ ನಗರಕ್ಕೆ ಕರೆತರಲಿದ್ದಾರೆ. ಸುಮಾರು 500ರಷ್ಟು ವಾಹನಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಬೆಳಗ್ಗೆ 10 ಗಂಟೆಗೆ ನಗರದ ಕೊಡಿಯಾಲಬೈಲ್‌ ಟಿ.ವಿ. ರಮಣ್‌ ಪೈ ಕನ್ವೆನ್ಶನ್‌ ಹಾಲ್‌ನಲ್ಲಿ ಅಭಿನಂದನ ಸಭೆ ಆಯೋಜಿಸಲಾಗಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನಿಲ್‌ ಕುಮಾರ್‌ ಮತ್ತು ದ.ಕ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 2 ಸಾವಿರದಷ್ಟು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ರವರು ತಿಳಿಸಿದ್ದಾರೆ.

ಅಭಿನಂದನ ಸಭೆಯ ಬಳಿಕ ನಳಿನ್‌ ಕುಮಾರ್‌ ಕಟೀಲು ಅಧ್ಯಕ್ಷತೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ. ಅನಂತರ ಬಿಜೆಪಿ ಪ್ರಮುಖರ ಸಭೆ ಆಯೋಜಿಸಲಾಗಿದೆ. ಸಂಜೆ ಸರ್ಕ್ಯುಟ್ ಹೌಸ್‌ನಲ್ಲಿ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English