ಮಂದಾರ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ನೀಡಿ : ಸಿದ್ದರಾಮಯ್ಯ ಆಗ್ರಹ

2:33 PM, Saturday, August 31st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

pacchanadiಮಂಗಳೂರು : ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ ಅವೈಜ್ಞಾನಿಕವಾಗಿ ಪಚ್ಚನಾಡಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡಿದ್ದರಿಂದ ನೆರೆ ಸಂದರ್ಭದಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಚ್ಚನಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ತ್ಯಾಜ್ಯ ಹಾಕುವ ಮೊದಲು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಮೊದಲೇ ರಿಟೈನಿಂಗ್ ಹಾಲ್ ಹಾಕಿದ್ದರೆ ಈ ರೀತಿ ಹಾನಿ ಆಗುತ್ತಿರಲಿಲ್ಲ. ಈಗಾಗಲೇ 27 ಮನೆಗಳಿಗೆ ಹಾನಿಯಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಈ ಜಾಗವನ್ನು ಒತ್ತುವರಿ ಮಾಡಿ ಶಾಶ್ವತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಡಿಕೆಶಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಕಾನೂನು ಪ್ರಕಾರ ಹೋರಾಟ ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರು ಸಮಸ್ಯೆಯನ್ನು ಸರಿಪಡಿಸಿಕೊಳ್ಳಲಿದ್ದಾರೆ . ಕೆಪಿಸಿಸಿ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ ಏನು ಇಲ್ಲ‌ ಎಂದು ಇದೇ ವೇಳೆ ತಿಳಿಸಿದರು .

ಬೆಳ್ತಂಗಡಿಗೆ ಆಗಮಿಸಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಕಚೇರಿಗೆ ತೆರಳಿ, ಆ ಬಳಿಕ ಪ್ರವಾಹ ಪೀಡಿತ ಚಾರ್ಮಾಡಿ ಪ್ರದೇಶಕ್ಕೆ ತೆರಳಲಿದ್ದಾರೆ. ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಬಿ.ರಮಾನಾಥ ರೈ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English