- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಡಿಕೆಶಿ ಬಂಧನ : ಮಂಗಳೂರಿನಲ್ಲಿ ಬಸ್‌ಗಳ ಮೇಲೆ ಕಲ್ಲು ತೂರಾಟ

kallu-torata [1]ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ನ ಹಿರಿಯ ನಾಯಕ ಡಿ ಕೆ ಶಿವಕುಮಾರ್‌ ಅವರ ಬಂಧನವನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನಲ್ಲೂ ಬಸ್‌ ಗೆ ಕಲ್ಲು ತೂರಿದ ಘಟನೆ ನಡೆದಿದೆ.

ಬೈಕ್‌ ನಲ್ಲಿ ಬಂದ ಕಿಡಿಗೇಡಿಗಳು ನಗರದ ನಂದಿಗುಡ್ಡೆ ಮತ್ತು ಫಳ್ನೀರ್‌ ನಲ್ಲಿ ಖಾಸಗಿ ಬಸ್‌ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ವರದಿಯಾಗಿದೆ.
ಡಿಕೆಶಿ ಬಂಧನ ವಿರೋಧಿಸಿ ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ಐದು ಬಸ್‌ ಗಳಿಗೆ ಕಲ್ಲು ತೂರಾಟ ನಡೆಸಲಾಗಿತ್ತು.