ಮೊಬೈಲ್ ಕಸಿದುಕೊಂಡಿದ್ದಕ್ಕೆ ಮಗ ತಂದೆಯನ್ನೇ ಕೊಲೆ ಮಾಡಿದ

12:40 PM, Monday, September 9th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

raghuveeraಬೆಳಗಾವಿ : ಮೊಬೈಲ್ ಕಸಿದುಕೊಂಡಿದ್ದಕ್ಕೆ ಮಗ ತನ್ನ ತಂದೆಯ ರುಂಡ ಹಾಗೂ ಕಾಲನ್ನು ಬೇಪರ್ಡಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕಾಕತಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.

ಕಾಕತಿಯ ಸಿದ್ದೇಶ್ವರ ನಗರದ ಶಂಕರ ದೇವಪ್ಪ ಕುಂಬಾರ(60) ಕೊಲೆಗೀಡಾಗಿದ್ದಾರೆ. ಮನೆಯಲ್ಲಿ ರಾತ್ರಿಯಾದರೂ ಮೊಬೈಲ್ ನಲ್ಲಿ ಆಟ ಅಡುತ್ತಿದ್ದಾಗ ಬೇಗ ಮಲಗು ಎಂದು ಬುದ್ದಿ ಮಾತು ಹೇಳಿ ಮೊಬೈಲ್ ಕಸಿದುಕೊಂಡಿದ್ದಕ್ಕೆ ಮಗ ರಘುವೀರ ತನ್ನ ತಂದೆಯನ್ನೇ ಮನೆಯಲ್ಲಿದ್ದ ಇಳಿಗೆಯಿಂದ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಕಳೆದ ಮೂರು ತಿಂಗಳ ಹಿಂದೆಯಷ್ಟೇ ಶಂಕರ ಅವರು ಡಿಆರ್ ಪೊಲೀಸ್ ಹುದ್ದೆಯಿಂದ ನಿವೃತ್ತರಾಗಿದ್ದರು. ಮಗ ರಘುವೀರ ಶಂಕರ ಕುಂಬಾರ(25) ಮೂರು ಬಾರಿ ಡಿಪ್ಲೊಮಾ ಪದವಿ ಫೇಲ್ ಆಗಿ ಮನೆಯಲ್ಲಿಯೇ ಇದ್ದನು.

ಸ್ಥಳಕ್ಕೆ ಗ್ರಾಮೀಣ ಎಸಿಪಿ ಶಿವಾರೆಡ್ಡಿ, ಕಾಕತಿ ಇನ್ಸ್ಪೆಕ್ಟರ್ ಎಸ್.ಎಸ್. ಕೌಜಲಗಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English