- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಟ್ರಾಕ್ಟರ್ ಮೇಲೆ ವಿದ್ಯುತ್ ತಂತಿ : ತಂದೆ, ಇಬ್ಬರು ಮಕ್ಕಳು ಮೃತ್ಯು

Koppala [1]ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ವಿದ್ಯುತ್ ಅವಘಡ ಸಂಭವಿಸಿದ್ದು, ಟ್ರಾಕ್ಟರ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸೇರಿ ಮೂವರು ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ತಂದೆ ಹನುಮಪ್ಪ ಬೀರಪ್ಪನವರ (30) ಮಕ್ಕಳಾದ ಪ್ರಿಯಾಂಕ(4), ಬೀರಪ್ಪ(2) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಟ್ರಾಕ್ಟರ್ ಮೂಲಕ ರಾಶಿ ಮಾಡಲು ಚಳಗೇರಿಯ ಹೊರವಲಯದಲ್ಲಿರುವ ಹೊಲಕ್ಕೆ ತೆರಳಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕುಷ್ಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.