ಮುಂಬೈ : ಗಣೇಶ ವಿಸರ್ಜನೆ ಸಂದರ್ಭದಲ್ಲಿ 17ಕ್ಕೂ ಹೆಚ್ಚು ಜನರು ನೀರಿನಲ್ಲಿ ಮುಳುಗಿ ಸಾವು

12:35 PM, Friday, September 13th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

ganeshaಮುಂಬೈ : ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಕೊನೆಯ ದಿನ ನಡೆದ ಗಣೇಶ ವಿಗ್ರಹಗಳ ವಿಸರ್ಜನೆ ಸಂದರ್ಭದಲ್ಲಿ 17ಕ್ಕೂ ಹೆಚ್ಚು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಲ್ಲದೇ ವಿವಿಧ ಜಿಲ್ಲೆಗಳಲ್ಲಿ ಐವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಬಿಗಿ ಬಂದೋಬಸ್ತ್ ನಲ್ಲಿ ಗುರುವಾರ ನಡೆದ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾರೀ ಪ್ರಮಾಣದಲ್ಲಿ ಜನ ಪಾಲ್ಗೊಂಡಿದ್ದರು. ಹತ್ತು ದಿನಗಳ ಕಾಲ ನಡೆದ ಗಣೇಶ ಹಬ್ಬದ ಕೊನೆಯ ದಿನವಾದ ಗುರುವಾರ ಗಣೇಶ ವಿಗ್ರಹಗಳ ವಿಸರ್ಜನೆ ನಡೆದಿತ್ತು.

ಮಹಾರಾಷ್ಟ್ರದ ವಿವಿಧೆಡೆ ಈ ದುರಂತ ಸಂಭವಿಸಿದ್ದು, ರತ್ನಗಿರಿಯಲ್ಲಿ ಮೂವರು, ನಾಸಿಕ್ ನಲ್ಲಿ ಇಬ್ಬರು, ಸಿಂಧುದುರ್ಗದಲ್ಲಿ ಒಬ್ಬರು, ಸತಾರಾದಲ್ಲಿ ಒಬ್ಬರು, ಥಾಣೆಯಲ್ಲಿ ಒಬ್ಬರು, ಧುಲೆಯಲ್ಲಿ ಒಬ್ಬರು, ಬುಲ್ದಾನಾದಲ್ಲಿ ಒಬ್ಬರು ಹಾಗೂ ಬಾಂದ್ರಾದಲ್ಲಿ ಒಬ್ಬರು ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English