ಭಟ್ಕಳ : ಯಾಂತ್ರಿಕ ದೋಣಿ ಮುಳುಗಡೆ : ಐದು ಮಂದಿ ಮೀನುಗಾರರ ರಕ್ಷಣೆ

5:15 PM, Monday, September 16th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

bhatkalaಭಟ್ಕಳ : ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳಗಡೆಗೊಂಡಿದ್ದು ಐದು ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಭಾನುವಾರ ಸಂಭವಿಸಿದೆ.

ಶ್ರೀ ಲಕ್ಷ್ಮೀವೆಂಕಟೇಶ ಹೆಸರಿನ ಈ ದೋಣಿ ರಾಘವೇಂದ್ರ ಖಾರ್ವಿ ಎಂಬುವವರಿಗೆ ಸೇರಿದ್ದು. ರಾಘವೇಂದ್ರ, ಚೇತನ, ಉದಯಕುಮಾರ, ಶನಿಯಾರ, ಸುಬ್ರಹ್ಮಣ್ಯ ಎಂಬವರನ್ನು ಅಪಾಯದಿಂದ ರಕ್ಷಿಸಲಾಗಿದೆ.

ಭಾನುವಾರ ಬೆಳಿಗ್ಗೆ ತಾಲೂಕಿನ ಕರಿಕಾಲ್ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ, ಬುಡದಿಂದ ನೀರು ತುಂಬಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಸಮೀಪವೇ ಇದ್ದ ಎರಡು ಯಾಂತ್ರಿಕ ಬೋಟುಗಳ ಸಹಾಯದಿಂದ ಮುಳುಗುತ್ತಿದ್ದ ಲಕ್ಷ್ಮೀ ವೆಂಕಟೇಶ ಬೋಟ್ ಹಾಗೂ ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.

ಈ ಬಗ್ಗೆ ಭಟ್ಕಳ ಕರಾವಳಿ ಕಾವಲು ಪಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English