ಪಣಂಬೂರು : ಅಪಹರಣ ಪ್ರಕರಣ; 4 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

3:33 PM, Tuesday, September 17th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Sandeshಮಂಗಳೂರು : ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿಶ್ವನಾಥ ಪಂಡಿತ್ ಎಂಬುವರ ಅಪಹರಣ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಲ್ಕಿ ಬಪ್ಪನಾಡು ನಿವಾಸಿ ಸಂದೇಶ್ ಪುತ್ರನ್ (40) ಬಂಧಿತ ಆರೋಪಿ.

ಆರೋಪಿ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ವಿಶ್ವನಾಥ ಪಂಡಿತ್ ಎಂಬುವರ ಅಪಹರಣ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ ಆರೋಪಿ ಬಳಿಕ ವಿವಿಧ ಕಡೆ ವಾಸ್ತವ್ಯ ಬದಲಿಸುತ್ತಾ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು.

ಹಲವು ಪ್ರಕರಣ: ಆರೋಪಿ ಸಂದೇಶ್ ಪುತ್ರನ ವಿರುದ್ಧ ಈ ಮೊದಲು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ, ಸುಲಿಗೆ ಹಾಗೂ ವಂಚನೆ ಪ್ರಕರಣ ದಾಖಲಾಗಿತ್ತು. ಸುರತ್ಕಲ್ ಹಾಗೂ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ನಿರ್ದೇಶನದಂತೆ ಡಿಸಿಪಿಗಳಾದ ಅರುಣಾಂಗ್ಶು ಗಿರಿ, ಲಕ್ಷ್ಮೀಗಣೇಶ್, ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀನಿವಾಸ್‌ಗೌಡ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ, ಪಿಎಎಸ್ಐಗಳಾದ ಉಮೇಶ್‌ ಕುಮಾರ್, ವಾರಂಟ್ ಸಿಬ್ಬಂದಿ ಶೈಲೇಂದ್ರ ಕೆ ಹಾಗೂ ಪಣಂಬೂರು ಠಾಣಾ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English