- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾತ್ರಿ ಹೊತ್ತು ನಿಲ್ಲಿಸಿದ್ದ ಬಸ್ಸಿಗೆ ಕಲ್ಲು : ಮೂವರ ಬಂಧನ

Mulky [1]ಮಂಗಳೂರು : ನಗರದ ಹೊರವಲಯದ ಕಿನ್ನಿಗೋಳಿ ಹಾಗೂ ಕಟೀಲು ಪರಿಸರದಲ್ಲಿ ರಾತ್ರಿ ಹೊತ್ತು ನಿಲ್ಲಿಸಿದ್ದ ಒಟ್ಟು 5 ಬಸ್ಸುಗಳಿಗೆ ಕಳೆದ ಸೆ.4ರ ಮುಂಜಾನೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಮುಲ್ಕಿ ಹಾಗೂ ಬಜ್ಪೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಬುಡೋಳಿ ಪೆರಾಜೆ ನಿವಾಸಿಗಳಾದ ಶಂಶೀರ್(27), ಅಬ್ದುಲ್ ಸತ್ತಾರ್(21) ನರಿಕೊಂಬು ನೆಹ್ರೂ ನಗರ ನಿವಾಸಿ ಮಹಮ್ಮದ್ ರಿಯಾಝ್(28) ಬಂಧಿತ ಆರೋಪಿಗಳು. ಬಂಧಿತರಿಂದ ಕಲ್ಲು ತೂರಾಟಕ್ಕೆ ಬಳಸಿದ್ದರೆನ್ನಲಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೆ.4ರಂದು ಮುಂಜಾನೆ ಕಿನ್ನಿಗೊಳಿ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಮೂರು ಬಸ್ಸು ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಬಟ್ಟಕೋಡಿ ಹಾಗೂ ಕಟೀಲು ಕಾಲೇಜು ಬಳಿ ನಿಲ್ಲಿಸಿದ್ದ ಬಸ್ಸುಗಳ ಗಾಜಿಗೆ ಕಲ್ಲೆಸೆದು ಹಾನಿಗೊಳಿಸಲಾಗಿತ್ತು.

ಇದೀಗ ಮುಲ್ಕಿ ಹಾಗೂ ಬಜ್ಪೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.