[1]ಸುಬ್ರಹ್ಮಣ್ಯ : ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮನೆ ಪಕ್ಕದಲ್ಲಿನ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಭವಿಷ್ ಪಿ.ಪಿ ಎಂದು ಗುರುತಿಸಲಾಗಿದೆ. ಗ್ರಾಮದ ಪರಮಲೆ ಜಾಲು ನಿವಾಸಿ ಪುರುಷೋತ್ತಮ ಗೌಡರ ಪುತ್ರ . ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನ ಅಂತಿಮ ಬಿ.ಕಾಂ ವಿಭಾಗದ ವಿದ್ಯಾರ್ಥಿ.
ಮಂಗಳವಾರ ಪರೀಕ್ಷೆ ಬರೆದು ಮನೆಗೆ ಮರಳಿದ್ದ ಆತ, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.