ಹೊಸಂಗಡಿ : ಬೈಕ್-ಲಾರಿ ಅಪಘಾತ; ಕಾಲೇಜು ವಿದ್ಯಾರ್ಥಿ ಸಾವು

1:44 PM, Wednesday, September 18th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

hosangadiಹೊಸಂಗಡಿ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಬೈಕ್ ಹಾಗೂ ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ಸೆ. 18 ರ ಬುಧವಾರ ಬೆಳಗ್ಗೆ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಸಂಭವಿಸಿದೆ.

ಮಂಗಳೂರು ಪದವಿ ಕಾಲೇಜಿನ ವಿದ್ಯಾರ್ಥಿಯಾದ ಬೇಕೂರು ಕುಬಣೂರು ದೇರ್ ಜಾಲು ಅಬ್ದುಲ್ ರೆಹಮಾನ್ ಅವರ ಪುತ್ರ ನವಾಬ್ (22) ಯುವಕ ಮೃತಪಟ್ಟಿದ್ದಾನೆ.

ನವಾಬ್ ಇಂದು ಬೆಳಗ್ಗೆ ಕಾಲೇಜಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಾಮಂಜೂರು ಚೆಕ್ ಪೋಸ್ಟ್ ಬಳಿ ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್ ಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ವೇಳೆ ಬೈಕ್ ಹೊಂಡಕ್ಕೆ ಬೀಳುವುದನ್ನು ತಪ್ಪಿಸಲು ಯತ್ನಿಸಿದಾಗ ರಸ್ತೆಗೆ ಬಿದ್ದ ನವಾಬ್ ಮೇಲೆ ಮೇಲೆ ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಚಲಿಸಿ ಬೈಕ್ ನೊಂದಿಗೆ ವಿದ್ಯಾರ್ಥಿಯನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ.

ನವಾಬ್ ದಿನವೂ ಬೈಕನ್ನು ಉಪ್ಪಳದಲ್ಲಿ ನಿಲ್ಲಿಸಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ. ಆದರೆ ಇಂದು ನವಾಬ್ ಬೈಕ್ ನಲ್ಲಿ ಕಾಲೇಜಿಗೆ ತೆರಳಿದ್ದಾನೆ. ನವಾಬ್ ನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English