- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

‘ಇದು ನಾಚಿಕೆಗೇಡಿನ ರಾಜಕೀಯ’ ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

Kumaraswami [1]ಬೆಂಗಳೂರು : ಆಪರೇಷನ್ ಕಮಲ ಕುಖ್ಯಾತಿಯ ಬಿಜೆಪಿ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ ಪಕ್ಷಪಾತಿ ನಿಲುವನ್ನು ಪ್ರತಿಪಾದಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಹೆಚ್.ಡಿ.ಕುಮಾರಸ್ವಾಮಿ, ‘ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ ಪಕ್ಷಪಾತಿ ಸಿಲುವನ್ನು ಪ್ರತಿಪಾಧಿಸಿದ್ದಾರೆ.ಅಗತ್ಯವಿದ್ದರೆ ಮತ್ತಷ್ಟು ನೀಡಲಿ, ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು ‘ನಾಚಿಕೆಗೇಡಿನ ರಾಜಕೀಯ’ ಎಂದು ಹೇಳಿದ್ದಾರೆ.