ಬೆಳ್ತಂಗಡಿ : ಇಲ್ಲಿನ ಗಂಗೋತ್ರಿ ವಸತಿ ಗ್ರಹದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು, ಮಂಗಳೂರಿನ ಉಳಾಯಿಬೆಟ್ಟು ನಿವಾಸಿ ಪ್ರದೀಪ್ ಪೂಜಾರಿ (26) ಎಂದು ಗುರುತಿಸಲಾಗಿದೆ.
ವಸತಿ ಗ್ರಹದ ಬಳಿ ತನ್ನ ದ್ವಿಚಕ್ರ ವಾಹನದೊಂದಿಗೆ ಅನುಮಾನಸ್ಪದವಾಗಿ ನಿಂತಿದ್ದ ಯುವಕನನ್ನು ಪೊಲೀಸರು ಪರಿಶೀಲನೆ ನಡೆಸಿದರು. ಈ ವೇಳೆ ಆತನ ದ್ವಿಚಕ್ರ ವಾಹನದಲ್ಲಿದ್ದ ಸುಮಾರು 6೦ ಗ್ರಾಂ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಆರೋಪಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಮಂಗಳೂರು ಸಬ್ ಜೈಲ್ ನಲ್ಲಿ ನಡೆದ ಮಾಡೂರು ಇಸುಬು ಕೊಲೆಯ ಪ್ರಮುಖ ಆರೋಪಿಯಾಗಿದ್ದಾನೆ. ಮಂಗಳೂರು ಉತ್ತರ ಠಾಣೆಯಲ್ಲಿ ಕೊಲೆಗೆ ಯತ್ನ ಮತ್ತು ಮುಲ್ಕಿ ಠಾಣೆಯಲ್ಲಿ ಡಕಾಯಿತಿಗೆ ಯತ್ನ ಪ್ರಕರಣಗಳು ಈತನ ಮೇಲಿದ್ದು, ಈತನು ಈ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English