- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಳ್ಳತನ ಪ್ರಕರಣ : ಓರ್ವ ಆರೋಪಿ ಬಂಧನ

ibrahim [1]ಪುತ್ತೂರು : ಮನೆಯೊಂದರಲ್ಲಿ ನಡೆಸಿದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿದ್ದಾರೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಕಲಾಯಿ ಮನೆಯ ಇಬ್ರಾಹೀಂ ಕಲಂದರ್(31) ಬಂಧಿತ ಆರೋಪಿ.

ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕ ಮತ್ತು ಠಾಣಾ ಸಿಬ್ಬಂದಿ ಆರೋಪಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿ, ಸುಮಾರು 50 ಸಾವಿರ ರೂ. ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ‌.

ಆರೋಪಿ ಇಬ್ರಾಹಿಂ ಕಲಂದರ್ ಜುಲೈ 3 ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಆರ್ಯಾಪುರ ಗ್ರಾಮದ ದೇವಸ್ಯ ಎಂಬಲ್ಲಿ ರಂಜತ್ ರೈ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ. ಈ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು.