ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ

1:07 PM, Tuesday, September 24th, 2019
Share
1 Star2 Stars3 Stars4 Stars5 Stars
(No Ratings Yet)
Loading...

siddaramayyaಹುಬ್ಬಳ್ಳಿ : ಉಪಚುನಾವಣೆಗೆ ನಾವು ಸಿದ್ಧರಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಪಕ್ಷಾಂತರಿಗಳನ್ನು ಮತದಾರರು ಯಾವತ್ತೂ ಕ್ಷಮಿಸುವುದಿಲ್ಲ. ಉಪಚುನಾವಣೆಯಲ್ಲಿ ನಾವು 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಅವರು ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು. ಮೈಸೂರು, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಓಟು ಹಾಕಿಸುವಂತೆ ಜಿಟಿ ದೇವೇಗೌಡರಿಗೆ ಕುಮಾರಸ್ವಾಮಿ ಹೇಳಿದ್ದಾರೆ. ಈ ವಿಚಾರವನ್ನು ಸ್ವತ: ಜಿಟಿಡಿ ಹೇಳಿದ್ದರು. ಕಾಂಗ್ರೆಸ್ ಈ ರೀತಿ ಹೇಳಿಲ್ಲವಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಸಮ್ಮಿಶ್ರ ಸರ್ಕಾರ ಅತ್ಯಂತ ಕೆಟ್ಟದಾಗಿತ್ತು ಎಂದು ಹೇಳುವ ಮೂಲಕ, ಅವರ ಸರ್ಕಾರಕ್ಕೆ ಅವರೇ ಪ್ರಶಸ್ತಿ ಕೊಟ್ಟಿದ್ದಾರೆ. ಮೈತ್ರಿ ಸರ್ಕಾರದ ಬಗ್ಗೆ ನಾನೇನು ಹೇಳಿಲ್ಲ, ಅವರೇ ಒಪ್ಪಿಕೊಂಡಿದ್ದಾರೆ. ಚುನಾವಣೆ ಬಂದಿರುವ ಹಿನ್ನೆಲೆಯಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English