[1]ಶಹಜಹಾನ್ ಪುರ್ : ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ವಿರುದ್ಧ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದ ಕಾನೂನು ವಿದ್ಯಾರ್ಥಿನಿಯನ್ನು ಸುಲಿಗೆ ಆರೋಪದಡಿ ಎಸ್ ಐಟಿ ಬುಧವಾರ ಬಂಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ 23ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಉತ್ತರಪ್ರದೇಶದ ಮನೆಯಲ್ಲಿ ಆಕೆಯನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ವರದಿ ವಿವರಿಸಿದೆ.
ಸ್ವಾಮಿ ಚಿನ್ಮಯಾನಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಕಾನೂನು ವಿದ್ಯಾರ್ಥಿನಿ ದೂರು ಆಧರಿಸಿ ಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಕಾನೂನು ವಿದ್ಯಾರ್ಥಿನಿ ತನ್ನ ಬಳಿ 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಚಿನ್ಮಯಾನಂದ ಸ್ವಾಮಿ ಆರೋಪಿಸಿದ್ದರು.
ವಸೂಲಿ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕಾನೂನು ವಿದ್ಯಾರ್ಥಿನಿಯ ಮೂವರು ಗೆಳೆಯರನ್ನು ಬಂಧಿಸಿದ್ದರು.