- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವಿಟ್ಲ : ಬೈಕ್-ಓಮ್ನಿ ಕಾರು ನಡುವೆ ಢಿಕ್ಕಿ; ಸವಾರ ಗಂಭೀರ

vitla [1]ವಿಟ್ಲ : ಇಂದು ಬೆಳಿಗ್ಗೆ ವಿಟ್ಲ ಸಾಲೆತ್ತೂರು ರಸ್ತೆಯ ನಾಡಕಚೇರಿ ಬಳಿ ಓಮ್ನಿ ವಾಹನ ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಗಾಯಾಳುವನ್ನು ಮೇಗಿನ ಪೇಟೆ ನಿವಾಸಿ ಝೈನೇದ್ (18) ಎಂದು ಗುರುತಿಸಲಾಗಿದೆ. ಝೈನೇದ್ ಕೆಲಸ ಮಾಡಲೆಂದು ಬೆಳಿಗ್ಗೆ ತನ್ನ ಬೈಕ್‌ನಲ್ಲಿ ವಿಟ್ಲ ಕಡೆಯಿಂದ ಬರುತ್ತಿದ್ದ ವೇಳೆ ಸಾಲೆತ್ತೂರು ಕಡೆಯಿಂದ ಬಂದ ಓಮ್ನಿ ಡಿಕ್ಕಿ ಹೊಡೆದಿದೆ. ಈತ ವಿಟ್ಲದಿಂದ ಸಾಲೆತ್ತೂರು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಸಾಲೆತ್ತೂರು ಕಡೆಯಿಂದ ಬಂದ ಓಮ್ನಿ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯವಾಗಿದ್ದು ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಹನದ ಅಪಘಾತದ ವೇಳೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಪೊಲೀಸರು ಇದನ್ನು ತೆರವುಗೊಳಿಸಿದರು.