ಮಂಗಳೂರು : ಶ್ರೀ ಕಟೀಲು ದೇವಾಲಯಕ್ಕೆ ಭೇಟಿ ನೀಡಿದ ನಟಿ ಶಿಲ್ಪಾ ಶೆಟ್ಟಿ

10:56 AM, Friday, September 27th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kateelಮಂಗಳೂರು : ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಬಾಲಿವುಡ್ ಕ್ವೀನ್ ಚಲನಚಿತ್ರ ನಟಿ ಶಿಲ್ಪಾಶೆಟ್ಟಿ ಭೇಟಿ ನೀಡಿದ್ದಾರೆ. ಕ್ಷೇತ್ರದಲ್ಲಿ ಶ್ರೀ ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ಕಟೀಲು ದೇವಳದ ವತಿಯಿಂದ ಅರ್ಚಕ‌ ಅನಂತ ಪದ್ಮನಾಭ ಅಸ್ರಣ್ಣ ಶೇಷವಸ್ತ್ರ ನೀಡಿ ಗೌರವಿಸಿದರು. ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ಶಿಲ್ಪ ಶೆಟ್ತಿಯವರನ್ನು ಸ್ವಾಗತಿಸಿದರು.

ಇನ್ನು ಇದಕ್ಕೂ ಮುನ್ನ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಂಸಿ ಆಸ್ಪತ್ರೆಯ ಮಾತೃತ್ವ ಮತ್ತು ಮಕ್ಕಳ ಆರೈಕೆಯ ನೂತನ ಘಟಕಕ್ಕೆ ಅವರು ಚಾಲನೆ ನೀಡಿದರು. ದ.ಕ. ಜಿಲ್ಲೆಯು ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದೆ. ಇಲ್ಲಿಗೆ ಬರಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಶಿಲ್ಪ ಶೆಟ್ಟಿ ಹೇಳಿದ್ದಾರೆ.

ಮಾತೃತ್ವ ಮಹಿಳೆಯರ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಈ ವೇಳೆ ಉತ್ತಮ ವೈದ್ಯಕೀಯ ನೆರವು ಸಲಹೆ ಅಗತ್ಯ. ಅದಕ್ಕಾಗಿ ಕೆಎಂಸಿ ಆಸ್ಪತ್ರೆಯ ಈ ಘಟಕ ಸಹಕಾರಿಯಾಗಲಿದೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಮಣಿಪಾಲ್ ವಿದ್ಯಾಸಂಸ್ಥೆ ಉಪ ಕುಲಪತಿ ಡಾ.ಎಚ್ ಎಸ್ ಬಲ್ಲಾಳ್, ಕೆಎಂಸಿ ಆಸ್ಪತ್ರೆಯ ರೀಜನಲ್ ಚೀಫ್ ಆಪರೇಟಿಂಗ್ ಆಫಿಸರ್ ಸಾಘಿರ್ ಸಿದ್ದಿಕಿ, ಮಣಿಪಾಲ್ ಹೆಲ್ತ್ ಎಂಟರ್ ಪ್ರೈಸಸ್ ಮುಖ್ಯಸ್ಥರಾದ ದಿಲಿಪ್ ಜೋಸೆ ಮತ್ತಿತರರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English