ಯೋಗೇಶ್ ಗೌಡ ಕೊಲೆ ಪ್ರಕರಣ : ಸಿಬಿಐ ತಂಡ ತನಿಖೆ ಆರಂಭ

12:00 PM, Saturday, September 28th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

yogish-gawdaಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಸಿಬಿಐ ತಂಡ ಆಗಮಿಸಿ ‌ಮಾಹಿತಿ‌ ಕಲೆ ಹಾಕುತ್ತಿದೆ.‌

ಸಿಬಿಐ ಅಧಿಕಾರಿಗಳು ಯೋಗೇಶ್ ಗೌಡ ಸಹೋದರ ಗುರುನಾಥ ಗೌಡ ಹಾಗೂ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಧಾರವಾಡ ತಾಲೂಕಿನ ಗೋವನಕೊಪ್ಪದಲ್ಲಿರುವ ಗುರುನಾಥಗೌಡ ತೋಟದ ಮನೆಯಲ್ಲಿ ಸಿಬಿಐ ತಂಡ ಮಾಹಿತಿ ಪಡೆದುಕೊಳ್ಳುತ್ತಿದೆ.

ಘಟನೆಯಲ್ಲಿ ಪ್ರಭಾವಿಗಳ ಕೈವಾಡವಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. 3 ದಿನಗಳ ಹಿಂದೆ ಆರೋಪಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿತ್ತು. ಇಂದು ಸಿಬಿಐ ತ‌ಂಡ ವಿಚಾರಣೆ ನಡೆಸಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English