ಮೈಸೂರು ದಸರಾ ಉದ್ಘಾಟನೆಗೆ ಸಿದ್ಧತೆ ಪೂರ್ಣ : ಸಂಸದ ಪ್ರತಾಪ್​​ ಸಿಂಹ

5:09 PM, Saturday, September 28th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

prathap-sinmhaಮೈಸೂರು : ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಿದ್ಧತೆಗಳು ಸಂಪೂರ್ಣವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ 9:39ಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಯಡಿಯೂರಪ್ಪ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನೆ ಮಾಡಲಿದ್ದು, ಚಾಮುಂಡಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಅಂತಿಮ ಹಂತದಲ್ಲಿದೆ.

ಸ್ವಚ್ಛ ವಾತಾವರಣದಲ್ಲಿ ನಾಳೆ ದಸರಾ ಉದ್ಘಾಟನೆ ಆಗಲಿದ್ದು, ಈ ಬಾರಿ ಯುವ ದಸರಾವನ್ನು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಉದ್ಘಾಟಿಸಲಿದ್ದಾರೆ. ಜೊತೆಗೆ ರಾನು ಮಂಡಲ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಂದೆ ದಸರಾವನ್ನು ನೋಡಲು ಬರುತ್ತಿದ್ದೆ. ಈ ಬಾರಿ ನಾನೇ ಕೆಲಸ ಕಾರ್ಯಗಳನ್ನು ನೋಡಿ ಮಾಡುತ್ತಿರುವುದು ಖುಷಿ ತಂದಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English