ಬಿಬಿಎಂಪಿ ಮೇಯರ್ ಚುನಾವಣೆ ನಡೆಸಲು ನಮ್ಮ ಅಭ್ಯಂತರವಿಲ್ಲ : ಸಿಎಂ ಬಿ.ಎಸ್. ಯಡಿಯೂರಪ್ಪ

5:51 PM, Monday, September 30th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

BSYಶಿವಮೊಗ್ಗ : ಮಂಗಳವಾರ ನಡೆಯುವ ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ನಮ್ಮಿಂದ ಯಾವುದೇ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯನ್ನು ಹೈಕೋರ್ಟ್ ಮುಂದೂಡಿತ್ತು. ಹೀಗಾಗಿ ಸ್ಥಾಯಿ ಸಮಿತಿಯೊಂದಿಗೆ ಮೇಯರ್ ಉಪಮೇಯರ್ ಚುನಾವಣೆ ನಡೆಸಲು ಉದ್ದೇಶಿಸಿದ್ದೆ.

ಆದರೆ ನಾಳೆಯೇ ಮೇಯರ್ ಉಪಮೇಯರ್ ಚುನಾವಣೆ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ ನಾಳೆಯೇ ಚುನಾವಣೆ ನಡೆಯಲಿ.

ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷರೊಂದಿಗೆ ಮಾತನಾಡಿ‌ ಚುನಾವಣೆ ಬಗ್ಗೆ ಗಮನಹರಿಸುವಂತೆ ಸೂಚಿಸಿದ್ದೇನೆ. ನಮ್ಮ ಅಭ್ಯರ್ಥಿಗಳು ಯಾರು ಎಂಬುದು ಬಳಿಕ ನಿಮಗೆ ತಿಳಿಯುತ್ತದೆ ಎಂದು ಹೇಳಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English