ಮಂಜೇಶ್ವರ : ಉಪಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

6:01 PM, Monday, September 30th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

manjeshwaraಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರಮುಖ ಅಭ್ಯರ್ಥಿಗಳು ಸೆ. 30 ರ ಸೋಮವಾರ ನಾಮಪತ್ರ ಸಲ್ಲಿಸಿದರು. ಯು ಡಿ ಎಫ್ ಅಭ್ಯರ್ಥಿ ಎಂ . ಸಿ ಖಮರುದ್ದೀನ್ ಸೋಮವಾರ ಬೆಳಿಗ್ಗೆ ಮಂಜೇಶ್ವರ ಬ್ಲಾಕ್ ಅಭಿವೃದ್ಧಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಉಪ್ಪಳದ ಮುಸ್ಲಿಂ ಲೀಗ್ ಕಚೇರಿಯಿಂದ ಮುಖಂಡರು ಕಾರ್ಯಕರ್ತರ ಜೊತೆ ಆಗಮಿಸಿದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದರು. ಎಲ್ ಡಿ ಎಫ್ ಅಭ್ಯರ್ಥಿ ಎಂ . ಶಂಕರ ರೈ ಬೆಳಿಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು .ವಿದ್ಯಾನಗರದಲ್ಲಿರುವ ಸಿಪಿಎಂ ಕಛೇರಿ ಯಿಂದ ಮುಖಂಡರ ಜೊತೆ ಮೆರವಣಿಗೆ ಮೂಲಕ ಆಗಮಿಸಿದ ಎಂ . ಶಂಕರ ರೈ ನಾಮಪತ್ರ ಸಲ್ಲಿಸಿದರು .

ಬಿಜೆಪಿ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ ನಾಮಪತ್ರ ಸಲ್ಲಿಸಿದರು. ರವೀಶ ತಂತ್ರಿಯವರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು .ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English