- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಕ್ರಮ ಮರಳು ಸಾಗಾಟ : ಮೂವರು ಆರೋಪಿಗಳು ಬಂಧನ

hiriyadka [1]ಉಡುಪಿ : ಇಲ್ಲಿನ ಬೆಳ್ಳಂಪಳ್ಳಿ ಗ್ರಾಮದ ಪುಣ್ಚೂರು ಹೊಳೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಮಧುಕರ ಪೂಜಾರಿ , ನಾಗರಾಜ ಶೆಟ್ಟಿ, ಗಿರೀಶ ಶೆಟ್ಟಿ ಬಂಧಿತರು. ಇವರು ಹೊಳೆಯಿಂದ ಅಕ್ರಮವಾಗಿ ಮರಳನ್ನು ತೆಗೆದು ಟೆಂಪೊದಲ್ಲಿ ತುಂಬಿಸಿ ಸಾಗಾಟ ಮಾಡುವ ಸಿದ್ದತೆಯಲ್ಲಿದ್ದರು, ಈ ವೇಳೆ ಖಚಿತ ಮಾಹಿತಿ ಮೆರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಇನ್ನು ಇವರನ್ನು ವಿಚಾರಣೆ ನಡೆಸಿದಾಗ ಮರಳನ್ನು ತೆಗೆಯಲು ಪರವಾನಿಗೆ ಇರುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.