ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದ ಬಾಲಕನ ಮೃತದೇಹ

6:02 PM, Tuesday, October 8th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

shahilಮಂಗಳೂರು : ಗೆಳೆಯರೊಂದಿಗೆ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದ ಬಾಲಕನ ಮೃತದೇಹ ಇಂದು ಮಂಗಳೂರಿನ ಬೆಂಗರೆಯಲ್ಲಿ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೆಂಗರೆ ನಿವಾಸಿ ಅಲ್ತಾಫ್ ಎಂಬವರ ಪುತ್ರ ಶಾಹಿಲ್ ( 16) ನಿನ್ನೆ ಸಮುದ್ರದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು. ಮೃತ ಬಾಲಕ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ. ಹಬ್ಬದ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಸಮುದ್ರಕ್ಕೆ ಇಳಿದಾಗ ಈ ದುರ್ಘಟನೆ ನಡೆದಿತ್ತು.

ಅಗ್ನಿ ಶಾಮಕದಳ ಸಿಬ್ಬಂದಿ ಸತತ ಹುಡುಕಾಟದಿಂದ ಇಂದು ಬಾಲಕನ ಮೃತದೇಹ ಕಸಬ ಬೆಂಗರೆ ಸಮೀಪದ ಸಮುದ್ರತೀರದಲ್ಲಿ ಪತ್ತೆಯಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English