ಸಂಸದೆ ಸುಮಲತಾ ವಿರುದ್ಧ ಕಾಂಗ್ರೆಸ್​ ಮುಖಂಡರ ಆಕ್ರೋಶ

12:59 PM, Thursday, October 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

sumalathaಮಂಡ್ಯ : ಸ್ವಾಭಿಮಾನದ ಹೆಸರಲ್ಲಿ ಮಂಡ್ಯ ಸಂಸದೆಯಾದ ಸುಮಲತಾ ಅವರ ನಡೆಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಕಿಡಿಕಾರಿದ್ದಾರೆ.

ಬುಧವಾರ ಸಕ್ಕರೆ ನಾಡಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಕಾಂಗ್ರೆಸ್ ಮುಖಂಡರ ಆಕ್ರೋಶ ಮುಂದುವರಿದಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ, ಸುಮಲತಾ ಅವರಿಗೆ ಗೆಲ್ಲುವ ಮೊದಲು ಕಾಂಗ್ರೆಸ್ ಕಚೇರಿ ಗೊತ್ತಿತ್ತು. ಆಗ ಕಚೇರಿಗೆ ಬಂದು ಕಾರ್ಯಕರ್ತರಲ್ಲಿ ಸೆರಗೊಡ್ಡಿ ಮತ ಭಿಕ್ಷೆ ಬೇಡಿಕೊಳ್ಳುವಾಗ ಗೊತ್ತಿತ್ತು. ಈಗ ಕಾಂಗ್ರೆಸ್ ಕಚೇರಿ ಮರೆತಿದ್ದಾರೆ. ಬಿಜೆಪಿ ಕಚೇರಿ ನೆನಪಿಗೆ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಜಿಲ್ಲೆಯ ಜನ ಮುಂದೆ ನಿಮಗೆ ಉತ್ತರ ಕೊಡುತ್ತಾರೆ. ಅಧಿಕಾರಕ್ಕಾಗಿ ಜನ ಹೀಗೆ ಬದಲಾಗುತ್ತಾರೆ ಅಂದರೆ ಮಾತನಾಡಲು ಅಸಹ್ಯವಾಗುತ್ತದೆ. ಬಿಜೆಪಿಯವರು ಏನೆಂದು ಜಿಲ್ಲೆಯ ಜನ ತಿಳಿದುಕೊಳ್ಳಬೇಕಿದೆ. ಜಿಲ್ಲೆಯ ಜನ ಮುಠ್ಠಾಳರಲ್ಲ ಎನ್ನುತ್ತಿದ್ದ ಸುಮಲತಾ ಅವರೇ ಜನರನ್ನ ಮುಠ್ಠಾಳರನ್ನಾಗಿ‌ ಮಾಡಲು ಹೊರಟಿದ್ದಾರಾ..? ಅದು ಸಾಧ್ಯವಿಲ್ಲ ಎಂದು ಹೇಳಿದರು.

ಜಿಲ್ಲೆಯ ಜನ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಅವರನ್ನು ಗೆಲ್ಲಿಸಿದ್ದಾರೆ. ಇಲ್ಲಿ ಹೇಳಲು ಹೆಸರಿಲ್ಲದ ಬಿಜೆಪಿ ಕಚೇರಿಗೆ ಹೋಗಿ ಕೃತಜ್ಞತೆ ಸಲ್ಲಿಸ್ತಾರೆ ಅಂದರೆ, ಜನ ಅಧಿಕಾರಕ್ಕಾಗಿ ಏನೆಲ್ಲಾ ಮಾಡುತ್ತಾರೆ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English