ಸುಳ್ಯ : ಸ್ನಾನ ಮಾಡಲು ಹೊಳೆಗೆ ಇಳಿದ ವಿದ್ಯಾರ್ಥಿ ಮೃತ್ಯು

10:03 AM, Monday, October 14th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

yashwithಸುಳ್ಯ : ಇಲ್ಲಿನ ಉಬರಡ್ಕದ ಹೊಳೆಯಲ್ಲಿ ಸ್ನಾನ ಮಾಡಲೆಂದು ತೆರಳಿದ್ದ ವಿದ್ಯಾರ್ಥಿಯೋರ್ವ ನೀರು ಪಾಲಾದ ದುರಂತ ಘಟನೆ ಸಂಭವಿಸಿದೆ.

ಸುಳ್ಯ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಯಶ್ವಿತ್ (15) ಮೃತ ದುರ್ದೈವಿ.

ವಿದ್ಯಾರ್ಥಿ ಯಶ್ವಿತ್ ಸೇರಿದಂತೆ ಮೂವರು ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಕಿರಣ್ ಎಂಬಾತ ನೀರಲ್ಲಿ ಮುಳುಗುತಿದ್ದ ಸಂದರ್ಭ ಯಶ್ವಿತ್ ಮತ್ತು ಇತರ ಇಬ್ಬರು ಸೇರಿ ಆತನನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು. ಆದರೆ ಈ ವೇಳೆ ಯಶ್ವಿತ್ ನೀರಿನ ಆಳಕ್ಕೆ ಬಿದ್ದ‌ ಎನ್ನಲಾಗಿದೆ. ಪೊಲೀಸರ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆ ಎತ್ತಲಾಗಿದೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English