ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಬಸವ ದಾಳಿ, ಸಾವು

10:06 PM, Saturday, October 12th, 2019
Share
1 Star2 Stars3 Stars4 Stars5 Stars
(No Ratings Yet)
Loading...

Balakrishna shetty ಬಜಪೆ:   ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರು ದೈವಸ್ಥಾನದ ಬಸವ ಹಾಯ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಪೆರಾರ ಪುಣ್ಕೆದಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (52) ಮೃತಪಟ್ಟವರು.

ಬಾಲಕೃಷ್ಣ ಶೆಟ್ಟಿಯವರೆ ಕಳೆದ ಒಂದ ವರ್ಷದಿಂದ ಬಸವನ ಚಾಕರಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಅದಕ್ಕೆ ಹುಲ್ಲು ಹಾಕಲು ಹೋದ ಸಂದರ್ಭ ಬಸವ ಕೊಂಬಿನಿಂದ ತಿವಿದಿದ್ದ ಎಂದು ತಿಳಿದು ಬಂದಿದೆ. ತಲೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English