ಐಎಂಎ ವಂಚನೆ ಪ್ರಕರಣ : ಜಾಮೀನು ಪಡೆದು ಹೊರ ಬಂದ ಆರೋಪಿಗೆ ಅದ್ಧೂರಿ ಸ್ವಾಗತ; ಸಾರ್ವಜನಿಕರಿಂದ ತೀವ್ರ ಟೀಕೆ

11:38 AM, Wednesday, October 16th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

muzaahiddinಬೆಂಗಳೂರು : ಐಎಂಎ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುಜಾಹಿದ್ದೀನ್ ಜಾಮೀನು ಪಡೆದು ಹೊರ ಬಂದ ಬಳಿಕ ಅದ್ಧೂರಿ ಸ್ವಾಗತ ದೊರೆತಿದೆ.

ಮುಜಾಹಿದ್ದೀನ್ಗೆ ಸ್ವಾಗತ ಮಾಡುವ ವೇಳೆ ಬೆಂಬಲಿಗರು ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಬೆಂಬಲಿಗರು ಫ್ರೆಜರ್ ಟೌನ್ ನಲ್ಲಿ ಪಟಾಕಿ‌ ಸಿಡಿಸಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಮುಜಾಹಿದ್ದೀನ್ ಗೆ ಜಾಮೀನು ನೀಡಿತ್ತು. ಆತ ಅ.11ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಜಾಮೀನು ಮಂಜೂರಾದ ಬೆನ್ನಲ್ಲೇ ಮುಜಾಹಿದ್ದೀನ್ ಬೆಂಬಲಿಗರು ಪಟಾಕಿ‌ ಸಿಡಿಸಿ‌ ಸಂಭ್ರಮಾಚರಣೆ ಮಾಡಿದ್ದಾರೆ.

ಈತ ಬಿಬಿಎಂಪಿ ನಾಮ ನಿರ್ದೇಶಕ ಸದಸ್ಯನಾಗಿದ್ದ. ಮನ್ಸೂರ್ ಖಾನ್ ಪರಾರಿಯಾಗಲು ಸಹಾಯ ಮಾಡಿದ್ದ. ಈ ಹಿನ್ನೆಲೆಯಲ್ಲಿ ಎಸ್ಐಟಿ ಈತನನ್ನು ಬಂಧಿಸಿತ್ತು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English