ನಂದೀಶ್ ರೆಡ್ಡಿಗೆ ಬಿಎಂಟಿಸಿ‌ ಅಧ್ಯಕ್ಷ ಸ್ಥಾನ ನೀಡಲು ಸಿಎಂ ಬಿ.ಎಸ್ ಯಡಿಯೂರಪ್ಪ ಆದೇಶ

3:01 PM, Thursday, October 17th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

BMTCಬೆಂಗಳೂರು : ಉಪ ಚುನಾವಣೆಯಲ್ಲಿ ಕೆ ಆರ್ ಪುರಂ ಟಿಕೆಟ್ ಆಕಾಂಕ್ಷಿಯ ಬಂಡಾಯ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಜಿ ಶಾಸಕ ನಂದೀಶ್ ರೆಡ್ಡಿಗೆ ಬಿಎಂಟಿಸಿ‌ ಉಪಾಧ್ಯಕ್ಷ ಸ್ಥಾನದ ಬದಲು ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಮಾಜಿ ಶಾಸಕ ನಂದೀಶ್ ರೆಡ್ಡಿಯನ್ನು ಬಿಎಂಟಿಸಿ ಉಪಾಧ್ಯಕ್ಷರಾಗಿ ನೇಮಕಗೊಳಿಸಲಾಗಿತ್ತು. ಆದರೆ ಉಪಾಧ್ಯಕ್ಷ ಸ್ಥಾನಕ್ಕೆ ಒಪ್ಪದ ಪರಾಜಿತ ಅಭ್ಯರ್ಥಿ ನಂದೀಶ್ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿರಲಿಲ್ಲ ಹೀಗಾಗಿ ಈಗ ಬಿಎಂಟಿಸಿ ಅಧ್ಯಕ್ಷರಾಗಿ ಮಾಜಿ ಶಾಸಕ ಎನ್ ಎಸ್ ನಂದೀಶ್ ರೆಡ್ಡಿ ನೇಮಕ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಈಗಿನಿಂದ ಮುಂದಿನ ಆದೇಶದವರೆಗೆ ಬಿಎಂಟಿಸಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ.ಇದಕ್ಕೆ ನಂದೀಶ್ ರೆಡ್ಡಿ ಒಪ್ಪುವ ಸಾಧ್ಯತೆ ಇದ್ದು, ಅನರ್ಹ ಶಾಸಕ ಬಿ ಎ ಬಸವರಾಜ್ ಹಾದಿ ಸುಗಮವಾದಂತಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English