[1]ಮಂಗಳೂರು : ಸಣ್ಣ ಜಗಳದಿಂದಾಗಿ ವ್ಯಕ್ತಿಯೋರ್ವವನು ತನ್ನ ಸಹೋದರನನ್ನು ಇರಿದು ಕೊಲೆ ಮಾಡಿದ ಘಟನೆ ಗುರುವಾರ ತಡ ರಾತ್ರಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗ್ರೆಯಲ್ಲಿ ನಡೆದಿದೆ.
ಬೆಂಗ್ರೆ ನಿವಾಸಿ ಮುಸ್ತಾಫ ಕೊಲೆಯಾದ ವ್ಯಕ್ತಿ. ಮುಸ್ತಫಾನರ ಸಹೋದರ ರೈಜು ಯಾನೆ ಅಬ್ದುಲ್ ರಹಮಾನ್ ಕೊಲೆ ಆರೋಪಿಯಾಗಿದ್ದಾನೆ.ಇವರಿಬ್ಬರೂ ಮೀನುಗಾರಿಕೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು.ಆಸ್ತಿಯ ವಿಚಾರವಾಗಿ ಮನೆಯಲ್ಲಿ ಸಹೋದರರಿಬ್ಬರೂ ಯಾವಾಗಲೂ ಗಲಾಟೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ ತಾಯಿ ಹಾಗೂ ತಂಗಿಗೆ ಮನೆಯ ವಿಚಾರದಲ್ಲಿ ರೈಜು ಹಿಂಸೆ ನೀಡುತ್ತಿದ್ದ ಎಂದು ಹೇಳಲಾಗಿದೆ.
ಗುರುವಾರ ರಾತ್ರಿ ಸುಮಾರು ಹತ್ತು ಗಂಟೆಯ ವೇಳೆಗೆ ಮತ್ತೆ ಇವರಿಬ್ಬರ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ತಾಯಿ ಹಾಗೂ ತಂಗಿಯ ಗಂಡ ಗಲಾಟೆ ಬಿಡಿಸಲು ಪ್ರಯತ್ನಿಸಿದ್ದಾರೆ.ಅದರೆ ಆರೋಪಿ ರೈಜು ತನ್ನಲ್ಲಿದ್ದ ಚೂರಿಯಿಂದ ಮುಸ್ತಾಫನಿಗೆ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಮುಸ್ತಾಫನನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಸ್ಪಂದಿಸದೇ ಮುಂಜಾನೆ ಸುಮಾರು 2.30 ರ ವೇಳೆ ಅವರು ಮೃತಪಟ್ಟಿದ್ದಾರೆ.
ಆರೋಪಿಯನ್ನು ಬೆಂಗ್ರೆ ಕಿಲೇರಿಯಾ ಮಸೀದಿಯ ಸಮೀಪದ ನಿವಾಸಿ ರೈಜು ಎಂದು ಗುರುತಿಸಲಾಗಿದ್ದು, ಇತನು ತನ್ನ ಸಹೋದರನಾದ ಮುಸ್ತಫಾನನ್ನು ಇರಿದು ಕೊಂದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.