ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಮಧ್ಯಾಹ್ನದ ಸುಮಾರಿಗೆ 34.72 ಶೇ. ಮತದಾನ

2:44 PM, Monday, October 21st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Manjeshwaraಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದ್ದು, ಮಧ್ಯಾಹ್ನ 12:30ರ ಸುಮಾರಿಗೆ 34.72 ಶೇ. ಮತದಾನವಾಗಿದೆ.

ಹಿಂದೆಂದೂ ಕಾಣದ ಬಿಗಿ ಭದ್ರತೆಯಲ್ಲಿ ಮತದಾನ ನಡೆಯುತ್ತಿದೆ. ಮುಂಜಾನೆಯಿಂದ ಮಳೆ ಸುರಿಯುತ್ತಿದ್ದರೂ ಮತದಾರರು ಅದನ್ನು ಲೆಕ್ಕಿಸದೆ ಮತಗಟ್ಟೆಗೆ ತಲುಪಿ ತಮ್ಮ ಹಕ್ಕು ಚಲಾಯಿಸಿದರು. ಕೆಲವೆಡೆ ಮತಯಂತ್ರಗಳಲ್ಲಿ ದೋಷ ಹಾಗೂ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಶಾಂತಿಯುತವಾಗಿದೆ .

ಎಲ್.ಡಿ.ಎಫ್. ಅಭ್ಯರ್ಥಿ ಎಂ. ಶಂಕರ ರೈ ಇಂದು ಬೆಳಗ್ಗೆ ಅಂಗಡಿಮೊಗರು ಶಾಲೆಯ 165ನೇ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಗೆಲುವು ನಿಶ್ಚಿತವಾಗಿದ್ದು, ಭಾರೀ ಅಂತರದಿಂದ ಈ ಸಲ ಎಲ್.ಡಿ.ಎಫ್ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English