ಮೈಸೂರು : ಜಿಂಕೆ ಬೇಟೆಯಾಡಿ ಮಾಂಸ ಮಾರಾಟ – ಆರೋಪಿ ಪರಾರಿ

1:40 PM, Tuesday, October 22nd, 2019
Share
1 Star2 Stars3 Stars4 Stars5 Stars
(No Ratings Yet)
Loading...

deer meat ಮೈಸೂರು : ನಾಗರಹೊಳೆ ಉದ್ಯಾನದ ಹುಣಸೂರು ವಲಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಮಾಂಸ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾದ ಘಟನೆ ನಡೆದಿದೆ.

ನಾಗರಹೊಳೆ ಉದ್ಯಾನದಂಚಿನ ಪಿರಿಯಾಪಟ್ಟಣ ತಾಲೂಕಿನ ಬೂತನಹಳ್ಳಿಯ ಶಿವಣ್ಣ ಅವರ ಪುತ್ರ ಅಭಿಲಾಷ್‌ ಕುಮಾರ್‌ ತಂಬಾಕು ಹದ ಮಾಡುವ ಬ್ಯಾರನ್‌ನಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಹುಣಸೂರು ವಲಯದ ಆರ್‌ಎಫ್‌ಒ ಹನುಮಂತರಾಜು ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ ವೇಳೆ ಆರೋಪಿ ಅಭಿಲಾಷ್‌ಕುಮಾರ್‌ ತಪ್ಪಿಸಿಕೊಂಡು ಓಡಿ ಹೋಗಿದ್ದು, ಸ್ಥಳದಲ್ಲಿ ನಾಲ್ಕು ಕೆಜಿ ಜಿಂಕೆ ಮಾಂಸ, ತಕ್ಕಡಿ, ಪ್ಲಾಸ್ಟಿಕ್‌ ಚೀಲ ದೊರೆತಿದ್ದು ಅದನ್ನು ವಶಪಡಿಸಿಕೊಂಡಿರುವ ಸಿಬ್ಬಂದಿಗಳು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒ ರಾಮು, ಪ್ರಸನ್ನ, ರತ್ನಾಕರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English