[1]
ಉಜಿರೆ : ಧರ್ಮಸ್ಥಳದಲ್ಲಿ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷಕದ 52ನೇ ವರ್ಧಂತ್ಯುತ್ಸವದ ಸಂಭ್ರಮ-ಸಡಗರ ಕೂಡಿತ್ತು.
ದೇವಸ್ಥಾನ, ಹೆಗ್ಗಡೆಯವರ ಬೀಡು, ವಸತಿ ಛತ್ರಗಳನ್ನು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಲಾಗಿತ್ತು.ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು.
ಧರ್ಮಸ್ಥಳದ ಭಕ್ತರು, ಅಭಿಮಾನಿಗಳು ಹಾಗೂ ಆಪ್ತರು ಹೆಗ್ಗಡೆಯವರನ್ನು ಭೇಟಿಯಾಗಿ ಫಲ-ಪುಷ್ಪ ಅರ್ಪಿಸಿ ಗೌರವಾರ್ಪಣೆ ಮಾಡಿದರು.
ದೇವಳದ ನೌಕರರ ವೃಂದದವರ ಛದ್ಮವೇಷ ಸ್ಪರ್ಧೆ ಕಣ್ಮನ ಸೆಳೆಯಿತು.
[2]ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಿದರು. ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ನೌಕರರ ಛದ್ಮವೇಷ ಸ್ಪರ್ಧೆ ವಿಶೇಷ ಗಮನ ಸೆಳೆಯಿತು.