ಕಾಲು ಜಾರಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

12:38 PM, Monday, October 28th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

sachinಉಡುಪಿ : ಹೆಬ್ರಿ ಸಂತೆಕಟ್ಟೆಯ ಜೋಮ್ಲು ತೀರ್ಥ ಜಲಪಾತಕ್ಕೆ ತೆರಳಿ ನೀರು ಪಾಲಾಗಿದ್ದ ಬ್ರಹ್ಮಾವರ ಸಮೀಪದ ಕೊಕ್ಕರ್ಣೆಯ ಕಾಡೂರು ಗಣಪೆ ನಿವಾಸಿ ಶೇಖರ್ ಶೆಟ್ಟಿ ಎಂಬುವರ ಪುತ್ರ ಸಚಿನ್ ಕುಮಾರ್ ಶೆಟ್ಟಿ (24) ಅವರ ಮೃತದೇಹ ಇಂದು ಪತ್ತೆಯಾಗಿದೆ.

ಸಚಿನ್ ಬೆಂಗಳೂರಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದೀಪಾವಳಿಯ ರಜೆಗೆ ಊರಿಗೆ ಬಂದಿದ್ದರು. ಭಾನುವಾರದಂದು ಸಚಿನ್ ಸೇರಿದಂತೆ ಏಳು ಮಂದಿ ಜೋಮ್ಲು ತೀರ್ಥಕ್ಕೆ ತೆರಳಿದ್ದು, ಈ ವೇಳೆ ಸಚಿನ್ ಕಾಲು ಜಾರಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ನಂತರ ಈತ ಸುಮಾರು ದೂರ ಈಜಿಕೊಂಡು ಹೋಗಿದ್ದು ಬಳಿಕ ನಾಪತ್ತೆಯಾಗಿದ್ದರು.

Sachin-Kumarಅವರಿಗಾಗಿ ಸ್ಥಳೀಯ ಯುವಕರು, ಪೊಲೀಸರು ಮತ್ತು ಅರಣ್ಯ ಇಲಾಖೆಯವರು ಹುಡುಕಾಟ ನಡೆಸಿದ್ದರು. ಇಂದು ಸಚಿನ್ ಅವರ ಮೃತದೇಹವು ಜಲಪಾತ ದಿಂದ ಸುಮಾರು 500ಮೀಟರ್ ದೂರದ ನೀರಿನಲ್ಲಿ ಪತ್ತೆಯಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English