ನವದೆಹಲಿ : 64 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಬೆಳಿಗ್ಗೆ ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ಭುವನೇಶ್ವರಿಗೆ ಪೂಜೆ ಮತ್ತು ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಾ.ವೆಂಕಟಾಚಲ ಹೆಗಡೆ, ಉಪಾಧ್ಯಕ್ಷೆ ಜಮುನಾ ಸಿ.ಮಠದ, ಕಾರ್ಯದರ್ಶಿ ಸಿ.ಎಂ.ನಾಗರಾಜ, ಜಂಟೀ ಕಾರ್ಯದರ್ಶಿ ರಾಧಾಕೃಷ್ಣ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ.ಎಂ.ಎಸ್.ಶಶಿಕುಮಾರ್, ಸವಿತಾ ನೆಲ್ಲಿ, ಸುಮಿತಾ ಮುರಗೋಡ ಹಾಗೂ ಇನ್ನೂ ಅನೇಕ ಕನ್ನಡಿಗರು ಪಾಲ್ಗೊಂಡಿದ್ದರು. ರಾಜ್ಯೋತ್ಸವ ಸಂಭ್ರಮವನ್ನು ನವೆಂಬರ್ ತಿಂಗಳ ಪ್ರತೀ ಭಾನುವಾರದಂದು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು.
Click this button or press Ctrl+G to toggle between Kannada and English