ಮಂಗಳೂರು : ಲಂಚದ ಆರೋಪದ ಮೇಲೆ ಪೊಲೀಸ್ ಮುಖ್ಯಪೇದೆ ಪ್ರಶಾಂತ್ ಶೆಟ್ಟಿ ಅಮಾನತು

1:29 PM, Saturday, November 2nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Prashanth-Shettyಮಂಗಳೂರು : ಮಂಗಳೂರು ಕದ್ರಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಪ್ರಶಾಂತ್ ಶೆಟ್ಟಿಯವರು ಲಂಚದ ಆರೋಪದ ಮೇಲೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಕಾರಣ ಈ ಕೂಡಲೇ ಅವರನ್ನು ಅಮಾನತ್ತಿನಲ್ಲಿರಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಈ ಕುರಿತಂತೆ ಡಿಸಿಪಿ ಕಾನೂನು ಸುವ್ಯವಸ್ಥೆಯವರಿಗೆ ದೂರು ಸಹ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ಇಲಾಖಾ ವಿಚಾರಣೆಯನ್ನು ಸಹ ನಾವು ಮಾಡಲಿದ್ದೇವೆ. ವ್ಯಕ್ತಿ ಯಾರೇ ಆಗಿದ್ದರೂ, ಯಾವುದೇ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದು ಕಂಡು ಬಂದಲ್ಲಿ ಮಂಗಳೂರು ಪೊಲೀಸ್ ಆಯುಕ್ತಾಲಯದಿಂದ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English