ಕಾಸರಗೋಡು : ಆದೂರು ಕೋಟೂರು ತಿರುವಿನಲ್ಲಿ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಇಂದು ಶನಿವಾರ ಸಂಭವಿಸಿದೆ.
ಕೋಟೂರು ನಿವಾಸಿ ಈಶ್ವರ ಭಟ್ ಮೃತರು ಎಂದು ಗುರುತಿಸಲಾಗಿದೆ. ಅವರು ಮೆಡಿಕಲ್ ರೆಪ್ರಸೆಂಟಿವ್ ಆಗಿದ್ದರು ಎಂದು ತಿಳಿದುಬಂದಿದೆ.
ಕರ್ನಾಟಕದಿಂದ ಕಾಸರಗೋಡು ಕಡೆಗೆ ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಿಣಾಮ ಈ ಅಪಘಾತ ಸಂಭವಿಸಿದೆ.
ಈ ಬಗ್ಗೆ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English