ಸಿದ್ದರಾಮಯ್ಯರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು : ಜನಾರ್ದನ ಪೂಜಾರಿ ಆರೋಪ

4:05 PM, Tuesday, November 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Janardhan-Poojary

ಮಂಗಳೂರು : ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ, ಅವರು ಪಕ್ಷವನ್ನು ಮುಗಿಸಿಯೇ ಹೋಗುವುದು. ಅವರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು, ಹೈಕಮಾಂಡ್ ಮಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ.

ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೇಳಿಕೆ ಬಗ್ಗೆ ತನ್ನ ವಿರುದ್ಧ ದೂರು ನೀಡಲಿ, ಪಕ್ಷದಿಂದ ತೆಗೆದು ಹಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನಪಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಕರೆದರೂ ನಾನು ಹೋಗುವುದಿಲ್ಲ. ಅವರು ಏನು ಹೇಳುತ್ತಾರೆ ನೋಡೋಣ, ಮರುದಿನ ನಾನು ಮಾತನಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪೂಜಾರಿ ಪ್ರತಿಕ್ರಿಯಿಸಿದರು.

ನನ್ನ ಆರೋಗ್ಯದ ಬಗ್ಗೆ ಸುಳ್ಳು ಪ್ರಚಾರ ಮಾಡಿದರೆ ಬೇಸರ ಇಲ್ಲ, ಅವರಿಗೆ ತೃಪ್ತಿ ಸಿಗುವುದಾದರೆ ಅಪಪ್ರಚಾರ ಮಾಡಲಿ ಜನಾರ್ದನ ಪೂಜಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಜಯ ಕುಮಾರ್ ಶೆಟ್ಟಿ, ಕಳ್ಳಿಗೆ ತಾರನಾಥ ಶೆಟ್ಟಿ, ಕರುಣಾಕರ, ಶಶಿರಾಜ್ ಅಂಬಟ್ ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English