ಸುಳ್ಯ : ಅಕ್ರಮ ಶ್ರೀಗಂಧ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧನ

12:15 PM, Wednesday, November 6th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Sulya

ಸುಳ್ಯ : ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿ, ಎರಡು ಗೋಣಿ ಚೀಲಗಳಲ್ಲಿ ಸುಮಾರು 31.424 ಕೆಜಿ ಗಳಷ್ಟು ತೂಕದ 40 ಗಂಧದ ಹಸಿ ಕೊರಡುಗಳನ್ನು ಮತ್ತು 3 ಚಕ್ಕೆಗಳನ್ನು, ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ಮಧ್ಯಾಹ್ನ ತಾಲೂಕಿನ ಜಾಲ್ಸೂರು ಎಂಬಲ್ಲಿ ಸುಳ್ಯ ಪೊಲೀಸರು ಮಡಿಕೇರಿ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎ-55, ಎಂ-0314 ಮಾರುತಿ ಆಲ್ಟೋ ಕಾರಿನಲ್ಲಿ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ನಿವಾಸಿಗಳಾದ ಅಶ್ರಫ್ ಮತ್ತು ಉನೈಸ್ ಎಂಬುವರು ಯಾವುದೇ ಪರವಾನಿಗೆ ಇಲ್ಲದೆ ಶುಂಠಿಕೊಪ್ಪದ ಕೃಷ್ಣ ಕುಟ್ಟಿ ಎಂಬುನೊಂದಿಗೆ ಸೇರಿ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕಲಂ 379 ಐಪಿಸಿ, 71(ಎ), 86,87 ಕರ್ನಾಟಕ ಅರಣ್ಯ ಕಾಯ್ದೆ-1963ಅಡಿ ಪ್ರಕರಣ ದಾಖಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ 65,000/- ಮತ್ತು ಕಾರಿನ ಅಂದಾಜು ಮೌಲ್ಯ ರೂ 75,000/- ಎಂದು ಅಂದಾಜಿಸಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English