ಮರದ ಕೊಂಬೆಗಳ ನಡುವೆ ಸಿಲುಕಿ ವ್ಯಕ್ತಿಯ ಸಾವು

5:21 PM, Saturday, October 20th, 2012
Share
1 Star2 Stars3 Stars4 Stars5 Stars
(5 rating, 1 votes)
Loading...

Youth diesಮಂಗಳೂರು: ವಾಮಂಜೂರು ಬಳಿಯ ತಾರಿಗುಡ್ಡೆ ಬೊಂಡೆಂತಿಲ ಎಂಬಲ್ಲಿ ಮರ ಕಡಿಯುತ್ತಿರುವಾಗ ಮರದ ಕೊಂಬೆಗಳ ನಡುವೆ ಸಿಲುಕಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದೆ. ಮಂಜೊಟ್ಟಿ ಹೌಸ್ ನಿವಾಸಿ ಅಬೂಬಕ್ಕರ್ ಅವರ ಮಗ ಆರಿಸ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಆರಿಸ್ ಹಾಗೂ ಇತರರು ಮರಕಡಿಯಲು ತೆರಳಿದ್ದು, ಆರಿಸ್ ದೊಡ್ಡದಾದ ಮರದ ಕೊಂಬೆಯನ್ನು ಕತ್ತರಿಸುವಾಗ ಕೊಂಬೆಯು ಆರಿಸ್ ಇದ್ದ ಕಡೆಗೆ ವಾಲಿದ್ದರಿಂದ ಆರಿಸ್ ಹಿಂದಿನ ಮರ ಹಾಗು ಕೊಂಬೆಯ ನಡುವೆ ಸಿಲುಕಿ ಸ್ಠಳದಲ್ಲೆ ಮೃತಪಟ್ಟಿದ್ದಾನೆ. ಉಳಿದಂತೆ ಇತರರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಘಟನಾ ಸ್ಥಳದಲ್ಲಿ ನೂರಾರು ಜನರು ಸೇರಿದ್ದು ಪೋಲಿಸರು ಹಾಗೂ ಅಗ್ನಿಶಾಮಕ ದಳಗಳ ಸಹಕಾರದಿಂದ ಮೃತದೇಹವನ್ನು ಹೊರತೆಗೆಯಲಾಯಿತು. ಪ್ರಕರಣ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English