ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅನರ್ಹ ಶಾಸಕರು, ಮಾಜಿ ಸಚಿವರು, ಹೆಚ್​ಡಿ ದೇವೇಗೌಡ

1:40 PM, Friday, November 8th, 2019
Share
1 Star2 Stars3 Stars4 Stars5 Stars
(No Ratings Yet)
Loading...

HDD

ಮೈಸೂರು : ಇಂದು ಅನರ್ಹ ಶಾಸಕರು, ಮಾಜಿ ಸಚಿವರು ಮಾತ್ರವಲ್ಲದೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಕೂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆಯೇ ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಚಾಮುಂಡಿಯ ದರ್ಶನ ಪಡೆದರು. ಬಳಿಕ ಮಾಜಿ ಸಚಿವ ಡಿಕೆ ಶಿವಕುಮಾರ್ ಕೂಡ ನಾಡ ಅಧಿದೇವತೆಯ ದರ್ಶನಕ್ಕೆ ಬಂದರು.

GTD

ಇದೇ ವೇಳೆ ಮಾಜಿ ಸಚಿವ ಜಿಟಿ ದೇವೇಗೌಡ ಡಿಕೆಎಸ್ಗೆ ಮುಖಾಮುಖಿಯಾದರು. ಉಭಯ ನಾಯಕರು ಆಗ ತಾನೆ ಪೂಜೆ ಮುಗಿಸಿ ಹೊರಬರುತ್ತಿದ್ದಂತೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಕೂಡ ಚಾಮುಂಡಿ ಸನ್ನಿಧಿಗೆ ಆಗಮಿಸಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್‌, ಹೆಚ್‌ಡಿಡಿ ಕಾಲಿಗೆ ಬಿದ್ದು ನಮಸ್ಕಾರ ಮಾಡಿದರು.

ಇದೇ ಸಂದರ್ಭದಲ್ಲಿ ಜಿ ಟಿ ದೇವೇ ಗೌಡ ಅವರೂ ದರ್ಶನಕ್ಕಾಗಿ ಆಗಮಿಸಿದ್ದರು. ಡಿಕೆಶಿ ಮತ್ತು ಅವರು ಇಬ್ಬರೂ ಮುಖಾಮುಖಿ ಆಗಿ ಕುಶಲೋಪರಿ ವಿಚಾರಿಸಿದರು. ದರ್ಶನದ ಬಳಿಕ ಮಾತನಾಡಿದ ಜಿಟಿಡಿ, ನಾನು ಪ್ರತಿ ಶುಕ್ರವಾರ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಬರುತ್ತೇನೆ. ಇವತ್ತು ಡಿ.ಕೆ.ಶಿವಕುಮಾರ್ ಅವರು ಬಂದಿದ್ದಾರೆ. ಅವರಿಗೆ ಚಾಮುಂಡೇಶ್ವರಿ ಮೇಲೆ ಹೆಚ್ಚು ಭಕ್ತಿ, ನಂಬಿಕೆ ಇದೆ. ಅವರು ಈ ಹಿಂದೆ ದೇವಿಗೆ ಬೆಳ್ಳಿ ಆನೆ ಸಹ ಕೊಟ್ಟಿದ್ದಾರೆ. ಅವರಿಗೆ ದೇವಿ ಒಳ್ಳೆಯದು ಮಾಡಲಿ ಎಂದರು.

jarakiholi

ಇಂದು ಅನರ್ಹ ಶಾಸಕರೆಂದು ಗುರುತಿಸಿಕೊಂಡಿರುವ ರಮೇಶ್ ಜಾರಕಿ ಹೊಳಿ, ಮಹೇಶ್ ಕಮಟಳ್ಳಿ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು ಮೈಸೂರಿನಲ್ಲಿ ಚಾಮುಂಡಿ ದೇವಿ ದರ್ಶನ ಪಡೆದು ನಂತರ ಮಾತನಾಡಿದ ರಮೇಶ್ ಜಾರಕಿ ಹೊಳಿ ನನ್ನ ಶತ್ರುಗಳಿಗೆ ದೇವರು ಒಳ್ಳೆಯದು ಮಾಡಲಿ. ಆದರ ಜೊತೆಗೆ ಆಪ್ತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೂ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

ನನಗೆ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಯಾವ ಭಯವೂ ಇಲ್ಲ. ನನ್ನೂರಿನಲ್ಲಿ ಇದ್ದಿದ್ದರೆ ಕೋಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗುತ್ತಿದೆ.

ಇವತ್ತು ಮೈಸೂರಿನಲ್ಲಿದ್ದೀನಿ ಹಾಗಾಗಿ ಚಾಮುಂಡಿ ದೇವಿ ದರ್ಶನ ಪಡೆದಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ ಡಿಕೆಶಿ ಅವರು ಕೂಡ ಇವತ್ತೇ ಚಾಮುಂಡಿ ದರ್ಶನ ಪಡೆಯುತ್ತಿರುವ ವಿಚಾರದ ಬಗ್ಗೆ ಕೇಳಿದಾಗ ನೋ ಕಾಮೆಂಟ್ಸ್ ಎಂದ ಅವರು, ಸುಪ್ರೀಂ ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುತ್ತೆ ಎಂಬ ವಿಶ್ವಾಸವಿದೆ. ತೀರ್ಪು ಏನಾಗುತ್ತೆ ಅದು ಆಗಲಿ ಬಿಡಲಿ. ಚುನಾವಣೆಗೆ ಸ್ಪರ್ಧಿಸುವ ಅವಕಾಶ ಸಿಕ್ಕರೆ ಸಾಕು, ನೋಡೋಣ ಏನಾಗುತ್ತೆ ಎಂದರು.

ರಮೇಶ್ ಜಾರಕಿಹೊಳಿ ಜೊತೆ ಮತ್ತೋರ್ವ ಅನರ್ಹ ಶಾಸಕ ಮಹೇಶ್ ಕಮಟಳ್ಳಿ ಕೂಡ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದು, ದೇವರ ದರ್ಶನಕ್ಕೂ ಸುಪ್ರೀಂ ಕೋರ್ಟ್ ತೀರ್ಪಿಗೂ ಸಂಬಂಧ ಇಲ್ಲ. ನಮಗೆ ಒಳ್ಳೆಯದಾಗುತ್ತೆ ಅಂದುಕೊಂಡಿದ್ದೇನೆ.

ರಾಜಕೀಯ ಕಾರಣಕ್ಕೆ ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು.

ಸದ್ಯದಲ್ಲೇ ಸುಪ್ರೀಂ ಕೋರ್ಟ್ ತೀರ್ಪು ಇರುವ ಹಿನ್ನೆಲೆಯಲ್ಲಿ ಇಬ್ಬರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English