ಕನ್ನಡ ಸಾಹಿತ್ಯ ಪರಿಷತ್ತು : ಮಂಗಳೂರು ತಾಲೂಕು ಘಟಕದಿಂದ ಯೋಧ ಸಂಕಥನ ಸಂವಾದ

2:07 PM, Friday, November 8th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

panamboor

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ತಾಲೂಕುಘಟಕವು ನವಮಂಗಳೂರು ಬಂದರು ಮಂಡಳಿ ಆಂಗ್ಲ ಮಾಧ್ಯಮ ಶಾಲೆ ಪಣಂಬೂರು ಇಲ್ಲಿನ ಕನ್ನಡ ಸಂಘದ ಸಹಯೋಗದೊಂದಿಗೆ ನಿವೃತ್ತ ಸೇನಾಧಿಕಾರಿ ಹಾಗೂ ಸಾಹಿತಿಕ್ಯಾ| ಬೆಳ್ಳಾಲ ಗೋಪಿನಾಥ್‌ ರಾವ್‌ ಅವರೊಂದಿಗೆ ಯೋಧ ಸಂಕಥನ ಎಂಬ ವಿಷಯದ ಕುರಿತು ಸಂವಾದ ನವಮಂಗಳೂರು ಬಂದರು ಮಂಡಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಭಾ ಭವನದಲ್ಲಿ ಕಾರ್ಯಕ್ರಮ ಇತ್ತೀಚೆಗೆಜರಗಿತು.

ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್. ಪ್ರದೀಪಕುಮಾರಕಲ್ಕೂರಕಾರ್ಯಕ್ರಮಉದ್ಘಾಟಿಸಿದರು. ಮಂಗಳೂರು ತಾಲೂಕುಕನ್ನಡ ಸಾಹಿತ್ಯ ಪರಿಷತ್‌ ಘಟಕಾಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಬಿ. ಶೆಟ್ಟಿಅಧ್ಯಕ್ಷತೆ ವಹಿಸಿದ್ದರು.

ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರತಿಮಾ ಎಂ, ಹಾಗೂ ಜನಾರ್ದನ ಹಂದೆ ಅತಿಥಿಗಳಾಗಿ ಭಾಗವಹಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಕೋಶಾಧಿಕಾರಿ ಪ್ರೊ. ಪಿ. ಕೃಷ್ಣಮೂರ್ತಿ ಸ್ವಾಗತಿಸಿದರು, ಗೌರವ ಕಾರ್ಯದರ್ಶಿ ಡಾ. ಪದ್ಮನಾಭ ಭಟ್‌ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು, ಶಾಲಾ ಶಿಕ್ಷಕ ರಕ್ಷಕ ಸಂಘದಅಧ್ಯಕ್ಷ ಸತೀಶ್ ಸದಾನಂದಧನ್ಯವಾದ ಸಲ್ಲಿಸಿದರು .

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English