ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಮಾಡಲು ನಾನು ತಯಾರಿದ್ದೆ ಕಾಂಗ್ರೆಸ್ ತಯಾರಿರಲಿಲ್ಲ : ಮಾಜಿ ಪ್ರಧಾನಿ ದೇವೆಗೌಡ

2:27 PM, Saturday, November 9th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

devegowda

ಮಂಗಳೂರು : ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದಾಗ ಖರ್ಗೆಯವರನ್ನು ಸಿಎಂ ಮಾಡಲು ನಾನು ತಯಾರಿದ್ದರೂ ಕಾಂಗ್ರೆಸ್ ತಯಾರಿರಲಿಲ್ಲ ಎಂದು ಮಾಜಿ ಪ್ರಧಾನಿ ದೇವೇ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್ ಮತ್ತು ಗೆಹ್ಲೋಟ್ ಜೊತೆಗೆ ನಾನು ಮಾತುಕತೆ ನಡೆಸಿದಾಗ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲಿ ಎಂದು ನಾನು ಆಫರ್ ಕೊಟ್ಟಿದ್ದೆ. ಆದರೆ, ಅವರು ಒಪ್ಪಲಿಲ್ಲ. ನಾನೇ ಹೈಕಮಾಂಡ್ ಜೊತೆಗೆ ಮಾತನಾಡುವೆ ಎಂದು ಪೋನ್ ಕೊಡಲು ಗುಲಾಂ ಅವರಿಗೆ ಹೇಳಿದರೂ ಅವರು ಒಪ್ಪಲಿಲ್ಲ. ಅವರು ಕುಮಾರಸ್ವಾಮಿ ಮುಖ್ಯ ‌ಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವಧಿಯಲ್ಲಿ ನಿತ್ಯವೂ ಸಮಸ್ಯೆ ಸೃಷ್ಟಿಸಲಾಯಿತು. ಮುಂದೆ ನಾವು ಯಾರ ಜೊತೆಗೆ ಹೊಂದಾಣಿಕೆ ಮಾಡುವುದಿಲ್ಲ. ನಮ್ಮ ಶಕ್ತಿ ಎಷ್ಟಿದೆಯೋ ಅಷ್ಟಕ್ಕೇ ಹೋರಾಟ ಮಾಡುತ್ತೇವೆ ‌ಮುಂದಿನ ಉಪ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತೇವೆ ಎಂದರು.

ಮುಂದಿನ ಮೂರು ತಿಂಗಳು ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸುತ್ತೇನೆ. ಜೆಡಿಎಸ್ ವಿಧಾನಪರಿಷತ್ ಸದಸ್ಯರ ಅಸಮಾಧಾನದ ಬಗ್ಗೆ ನವೆಂಬರ್ 12 ರಿಂದ 14 ವರೆಗೆ ಚರ್ಚೆ ನಡೆಸಿ ಅದನ್ನು ಬಗೆಹರಿಸಲಾಗುವುದು ಎಂದರು. 2020ಕ್ಕೆ ಚುನಾವಣೆ ಬರುವ ಸಾಧ್ಯತೆ ಇದೆ. ಮುಂದೆ ಅತಂತ್ರ ಫಲಿತಾಂಶ ಬಂದರೆ ಕಾಂಗ್ರೆಸ್ ನವರ ನಿರ್ಧಾರದ ಮೇಲೆ ನನ್ನ ನಿರ್ಧಾರ ತೆಗೆದುಕೊಳ್ಳುವೆ ಎಂದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English