ವಿದ್ಯಾರ್ಥಿ ಶಿಕ್ಷಕರಲ್ಲಿ ಪಠ್ಯಕ್ರಮವನ್ನು ಮೀರಿದಚಿಂತನೆ ಬಹುಮುಖ್ಯ : ಪ್ರೊ. ಯಡಪಡಿತ್ತಾಯ

6:01 PM, Monday, November 11th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

shakti

ಮಂಗಳೂರು : ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಾಗಿರುವಜತೆಯಲ್ಲೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಠ್ಯಕ್ರಮವನ್ನು ಮೀರಿಚಿಂತಿಸಬೇಕಾಗುತ್ತದೆ. ಇದಕ್ಕೆ ಸುಧಾರಿತ ಕಲಿಕಾ ಕ್ರಮಅತ್ಯಂತ ಪೂರಕಎಂದು ಮಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಯಡಪಡಿತ್ತಾಯ ಹೇಳಿದರು.

ಶಕ್ತಿನಗರದ ಶಕ್ತಿ ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದಅನ್ವಯವಾಗಲಿರುವ ಶಕ್ತಿ ಎಡ್ವಾನ್ಸ್‌ಡ್ ಲರ್ನಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

shakti

ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಖರವಾದಗುರಿ, ಶಿಸ್ತು ಹಾಗೂ ಸಮರ್ಪಣಾ ಮನೋಭಾವದಿಂದ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದವರು ಹೇಳಿದರು.

ಶಿಕ್ಷಣ ಸಂಸ್ಥೆಗಳು ಪದವಿಗಳನ್ನು ನೀಡುವ ಸಂಸ್ಥೆಗಳಾಗಿರುವ ಈ ಕಾಲಘಟ್ಟದಲ್ಲಿಇಂತಹ ಸುಧಾರಿತ ಶಿಕ್ಷಣ ಕ್ರಮಗಳು ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಕೌಶಲ್ಯವನ್ನು ವೃದ್ಧಿಸುತ್ತವೆ. ಮುಂದೆಅವರಉದ್ಯೋಗಜೀವನದಲ್ಲಿಯೂ ಈ ಕ್ರಮಗಳು ಸಹಕಾರಿಎಂದುಅವರು ಹೇಳಿದರು.

shakti

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಸ್ವಾಯತ್ತ ವಿಶ್ವವಿದ್ಯಾಲಯದ ಕುಲಪತಿಡಾ.ಎನ್ ವಿನಯ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತಗೊಳ್ಳದೆ, ಉತ್ತಮ ಮಾನವರಾಗಿ ಬೆಳೆಯಬೇಕಾಗಿದೆ. ಇದಕ್ಕೆ ಮಾನಸಿಕ ಬೆಳವಣಿಗೆ ಅಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸುಧಾರಿತ ಕಲಿಕಾ ಕ್ರಮ ಮಕ್ಕಳಲ್ಲಿ ಮನೋಸ್ಥೈರ್ಯವನ್ನುತುಂಬುತ್ತದೆಎಂದರು.

ಶಕ್ತಿ ಅಡ್ವಾನ್ಸ್‌ಡ್ ಲರ್ನಿಂಗ್ ಬಗ್ಗೆ ದಿಕ್ಸೂಚಿ ಭಾಷಣ ನೀಡಿದ ಸಂಸ್ಥೆಯ ಸಂಯೋಜಕಡಾ. ದರ್ಶನ್‌ರಾಜ್, ಇದು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ಬೆಳೆಸಿ ಸಂಶೋಧನಾತ್ಮಕ ನಿಲುವಿನೊಂದಿಗೆ ಕಲಿಕೆಯಲ್ಲಿ ತೊಡಗಿಕೊಳ್ಳಲು ಸಹಕಾರಿ ಮಾತ್ರವಲ್ಲದೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಒತ್ತಡವಿಲ್ಲದೆಎದುರಿಸಲು ನೆರವು ನೀಡಲಿದೆಎಂದರು.

shakti

ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳನ್ನು ಎನ್.ಎಸ್.ಒ, ಡಿ.ಎಂ.ಬಿ, ಐ.ಇ.ಒ, ಐ.ಜಿ.ಕೆ.ಒ, ಎನ್.ಐ.ಎಂ.ಒ, ಎನ್.ಡಿ.ಎ, ಕೆ.ಎ.ಪಿ.ವೈ ಮೊದಲಾದ ಪರೀಕ್ಷೆಗಳನ್ನು ಸಮರ್ಥವಾಗಿಎದುರಿಸಲು ಶಕ್ತಿ ಅಡ್ವಾನ್ಸ್‌ಡ್ ಲರ್ನಿಂಗ್‌ನಲ್ಲಿತರಬೇತಿ ನೀಡಲಾಗುತ್ತದೆ. ಇದು ಮುಂದೆಐ.ಎ.ಎಸ್, ಐ.ಪಿ.ಎಸ್, ಐ.ಆರ್.ಎಸ್, ಕೆ.ಎ.ಎಸ್ ಮೊದಲಾದ ಪರೀಕ್ಷೆಗಳನ್ನು ಎದುರಿಸಲು ಪ್ರಯೋಜನವಾಗಲಿದೆ. ವಿದ್ಯಾರ್ಥಿಗಳ ಶಾಲಾ ಪರೀಕ್ಷೆಗಳಿಗೆ ಅಡ್ಡಿಯಾಗದಂತೆ, ಪಠ್ಯ-ಪಠ್ಯೇತರ ಚಟುವಟಿಕೆಗಳಿಗೆ ಯಾವುದೇತೊಂದರೆಯಾಗದಂತೆಅವರ ಪರಿಪೂರ್ಣ ವ್ಯಕ್ತಿತ್ವರೂಪಿಸುವತ್ತ ಈ ವ್ಯವಸ್ಥೆಯಡಿ ಗಮನ ನೀಡಲಾಗುತ್ತದೆ.

ಇಂಜಿನಿಯರಿಂಗ್, ವೈದ್ಯಕೀಯ, ವ್ಯವಹಾರ, ಬ್ಯಾಕಿಂಗ್, ಸ್ವಉದ್ಯೋಗ, ಶಿಕ್ಷಣ, ರಕ್ಷಣೆ, ಕೃಷಿ ಹೀಗೆ ವಿವಿಧ ವಲಯಗಳ ಸಾಧಕರನ್ನು ಕರೆಸಿ ವಿದ್ಯಾರ್ಥಿಗಳಿಗೆ ಆ ಕ್ಷೇತ್ರದ ಪರಿಚಯ, ಉದ್ಯೋಗಾವಕಾಶಗಳು ಹಾಗೂ ಆ ಕ್ಷೇತ್ರಗಳಿಗೆ ಪ್ರವೇಶದ ಬಗ್ಗೆ ಪೂರ್ಣ ಮಾಹಿತಿ ನೀಡಲಾಗುತ್ತದೆಎಂದುಡಾ. ದರ್ಶನ್‌ರಾಜ್ ತಿಳಿಸಿದರು.

shakti

ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ. ಆರಂಭದಲ್ಲಿ ಸ್ವಾಗತ ಬಯಸಿದರು. ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಪ್ರಭಾಕರಜಿ.ಎಸ್ ವಂದಿಸಿದರು. ಕು. ಚೇತನ ಹಾಗೂ ಕು. ಮಾನಸಕಾರ್ಯಕ್ರಮವನ್ನು ನಿರೂಪಿಸಿದರು.

ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್ ಪ್ರಾಸ್ತಾವಿಕವಾಗಿ ಮಾತನಾಡಿ ಶಕ್ತಿ ಶಿಕ್ಷಣ ಸಂಸ್ಥೆಯು ಬೆಳೆದು ಬಂದ ಹಾದಿಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಸಪಾ ಜಿಲ್ಲಾಧ್ಯಕ್ಷ ಪ್ರದೀಪ್‌ಕುಮಾರ್‌ಕಲ್ಕೂರ, ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾಕ್, ಸಂಸ್ಥೆಯ ಮುಖ್ಯ ಸಲಹೆಗಾರರಮೇಶ್ ಕೆ., ಸಂಸ್ಥೆಯಅಭಿವೃದ್ಧಿಅಧಿಕಾರಿ ಪ್ರಖ್ಯಾತ್‌ರೈ, ಗೋಪಾಲಕೃಷ್ಣ ಪ್ರಿ ಸ್ಕೂಲ್‌ನ ಸಂಯೋಜಕರಾದ ನೀಮಾ ಸಕ್ಸೇನಾ, ಬೈಕಾಡಿಜನಾರ್ದನಆಚಾರ್ ಮೊದಲಾದವರು ಉಪಸ್ಥಿತರಿದ್ದರು.

shakti

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English